5:16 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಹಾಡುಗಳು ಮಧುರ ಲಯ ಸಾಹಿತ್ಯ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ.

05/09/2023, 14:55

ಉಡುಪಿ(reporterkarnataka.com): ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ  ವಿದ್ವಾನ್ ಯಶವಂತ ಹೇಳಿದರು.
ಅವರು ಭಾನುವಾರ  ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ತಂಡದ ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದರು.
ಹಾಡುಗಳನ್ನು ಸಂಗೀತ ಕೃತಿಗಳೆಂದು ಪರಿಗಣಿಸಲಾಗುತ್ತದೆ . ಸ್ಫೂರ್ತಿ, ಸಂವೇದನೆ ಮೂಲಕ ಮನಸ್ಸಿಗೆ ಅಪ್ತವಾಗುತ್ತವೆ ಎಂದರು.
ಕೆಎಂಸಿ ಅಸ್ಪತ್ರೆಯ  ಇಲೆಕ್ಟ್ರಿಕಲ್ ಇಂಜಿನಿಯರ್  ರವೀಂದ್ರ ಮಾತನಾಡಿ, ಸಾಹಿತ್ಯಕ್ಕೆ ರಾಗವನ್ನು ಕೊಟ್ಟು ಹಾಡುಗಳನ್ನು ಹಾಡುತ್ತಾ ಮನಸ್ಸನ್ನು  ಮುದಗೊಳಿಸಲು ಸಾಧ್ಯ ಎಂದರು.
ಗಾಯಕಿ ರಶ್ಮಿಅರ್. ಪ್ರಭು  ಮಾತನಾಡಿ, ಸ್ವರಕ್ಕೆ ಅಮೃತವನ್ನು ನೀಡುವ ಸ್ವರಾಮೃತ ಪರಿಕಲ್ಪನೆ ಅದ್ಭುತವಾಗಿದೆ. ಹಾಡುಗಾರರಿಗೆ ಈ ತಂಡ ಆಶ್ರಯ ನೀಡಲಿದೆ ಎಂದರು
ಖ್ಯಾತ ಗಾಯಕಿ ವೈಷ್ಣವಿ ರವೀಂದ್ರ ಮಾತನಾಡಿ, ಹಾಡುಗಾರಿಕೆ ಕೇವಲ ಮನರಂಜನೆ ಯಾಗಿಸದೆ ,ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಉದ್ಯಮಿ ರಾಧಾಕೃಷ್ಣ ಮಣಿಪಾಲ್ ಮಾತನಾಡಿದರು.
ಶಾಶ್ವತ್ ತೆಳ್ಳಾರು, ಡಾ.ಗುರುಪ್ರಸಾದ್  ಶುಭ ಹಾರೈಸಿದರು.

ಸಭೆಯಲ್ಲಿ ಪತ್ರಕರ್ತ ಹರಿಪ್ರಸಾದ್ ನಂದಳಿಕೆ, ರಾಂ ಅಜೆಕಾರು , ಚಿತ್ತಾರ ಸೇವಾ ರೂವಾರಿ ಸುಜಿತ್ ನಂದಳಿಕೆ,  ಮಲಬಾರ್ ಗೋಲ್ಡ್ ಮಾರ್ಕೆಟಿಂಗ್ ವ್ಯವಸ್ಥಾಪಕ ರಾಘವೇಂದ್ರ ನಾಯಕ್, ಲೇಖಕಿ ಸುಮ ಕಿರಣ್ , ಲೆಕ್ಕ ಪರಿಶೋಧಕ ಸುರೇಶ್, ಗೀತಾಂಜಲಿ , ಖ್ಯಾತ ಛಾಯಾಗ್ರಾಹಕ ಶರತ್ ಕಾನಂಗಿ, ಡಾ. ಸ್ನೇಹ ಗುರುಪ್ರಸಾದ್, ಉದ್ಯಮಿ ಗಳಾದ ಹರೀಶ್ ಶೆಟ್ಟಿ, ಶಶಿಕಾಂತ್ ಪ್ರಭು ,ಜಯಾನಂದ ಕುಲಾಲ್ ,ಪ್ರಸಾದ್‌ಅಚಾರ್ಯ, ರೂಪೇಶ್ , ಸುಭಾಸ್
ಕಿರಣ್   ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು