3:14 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ

10/01/2022, 13:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ನಗರದಲ್ಲಿ ಭಾನುವಾರ ರಾತ್ರಿ 11 ಗಂಟೆ ಈ ದುರ್ಘಟನೆ ನಡೆದಿದೆ. ಮೂಲತಃ ವಿಜಯ ನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಮೂರ್ತಿ ನಾಯ್ಕ ಸ್ಥಳದಲ್ಲಿಯೇ ಮೂರ್ತಿ ನಾಯ್ಕ್ (38)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹಾವೇರಿ ಜಿಲ್ಲೆ ಸಾಂಗೂರ್ ಶುಗರ್ ಫ್ಯಾಕ್ಟರಿಗೆ ಕಟಾವು ಮಾಡಿದ್ದ ಕಬ್ಬನ್ನು, ಎತ್ತಿನಗಾಡಿಯಲ್ಲಿ ತೆಗೆದು ಕೊಂಡುಹೋಗಿದ್ದಾರೆ. ರಾತ್ರಿ 11ಗಂಟೆಗೆ ಹೊತ್ತಲ್ಲಿ ಲಾರಿ ಬಂಡಿ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಎತ್ತಿನ ಗಾಡಿ ಸಂಪೂರ್ಣ ಜಖಂಗೊಂಡಿದ್ದು  ಸ್ಥಳದಲ್ಲೇ ಮೂರ್ತಿ ನಾಯ್ಕ್ ಮೃತಪಟ್ಟಿದ್ದಾರೆ. 2 ಎತ್ತುಗಳು ಕೂಡ ಮೃತ ಸ್ಥಳದಲ್ಲಿಯೇ ಸಾವನ್ನಪ್ಪಿವೆ.ಎತ್ತಿನ ಗಾಡಿಯಲ್ಲಿದ್ದ ಮೃತನ ಚಿಕ್ಕಪ್ಪ ಅರ್ಜುನ ನಾಯ್ಕ್ (55)ರವರಿಗೆ ಕಾಲು ಮುರಿದಿದೆ, ಅವರ ಚಿಕ್ಕಪ್ಪ ನ ಮಗ ಸೀನಾನಾಯ್ಕ(18)ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಜರುಗಿದ ತಕ್ಷಣ ಅಪಘಾತ ಪಡಿಸಿದ ಲಾರಿ ಡ್ರೈವರ್ ಲಾರಿ ಸ್ಥಳದಲ್ಲಿಯೇ ಬಿಟ್ಟು ಪರಾರಿ ಯಾಗಿದ್ದಾನೆಂದು ಹೇಳಲಾಗಿದೆ, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ ಎಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು