3:23 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ

10/01/2022, 13:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ನಗರದಲ್ಲಿ ಭಾನುವಾರ ರಾತ್ರಿ 11 ಗಂಟೆ ಈ ದುರ್ಘಟನೆ ನಡೆದಿದೆ. ಮೂಲತಃ ವಿಜಯ ನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಮೂರ್ತಿ ನಾಯ್ಕ ಸ್ಥಳದಲ್ಲಿಯೇ ಮೂರ್ತಿ ನಾಯ್ಕ್ (38)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹಾವೇರಿ ಜಿಲ್ಲೆ ಸಾಂಗೂರ್ ಶುಗರ್ ಫ್ಯಾಕ್ಟರಿಗೆ ಕಟಾವು ಮಾಡಿದ್ದ ಕಬ್ಬನ್ನು, ಎತ್ತಿನಗಾಡಿಯಲ್ಲಿ ತೆಗೆದು ಕೊಂಡುಹೋಗಿದ್ದಾರೆ. ರಾತ್ರಿ 11ಗಂಟೆಗೆ ಹೊತ್ತಲ್ಲಿ ಲಾರಿ ಬಂಡಿ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಎತ್ತಿನ ಗಾಡಿ ಸಂಪೂರ್ಣ ಜಖಂಗೊಂಡಿದ್ದು  ಸ್ಥಳದಲ್ಲೇ ಮೂರ್ತಿ ನಾಯ್ಕ್ ಮೃತಪಟ್ಟಿದ್ದಾರೆ. 2 ಎತ್ತುಗಳು ಕೂಡ ಮೃತ ಸ್ಥಳದಲ್ಲಿಯೇ ಸಾವನ್ನಪ್ಪಿವೆ.ಎತ್ತಿನ ಗಾಡಿಯಲ್ಲಿದ್ದ ಮೃತನ ಚಿಕ್ಕಪ್ಪ ಅರ್ಜುನ ನಾಯ್ಕ್ (55)ರವರಿಗೆ ಕಾಲು ಮುರಿದಿದೆ, ಅವರ ಚಿಕ್ಕಪ್ಪ ನ ಮಗ ಸೀನಾನಾಯ್ಕ(18)ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಜರುಗಿದ ತಕ್ಷಣ ಅಪಘಾತ ಪಡಿಸಿದ ಲಾರಿ ಡ್ರೈವರ್ ಲಾರಿ ಸ್ಥಳದಲ್ಲಿಯೇ ಬಿಟ್ಟು ಪರಾರಿ ಯಾಗಿದ್ದಾನೆಂದು ಹೇಳಲಾಗಿದೆ, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ ಎಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು