7:24 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ?

03/11/2022, 20:06

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ್ಟು ಕಾಂಗ್ರೇಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಅಥಣಿಯಿಂದ ಖಿಳೇಗಾವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಥಣಿ ಗ್ರಾಮೀಣ ಪ್ರದೇಶದಿಂದ ಅಬ್ಬಿಹಾಳವರೆಗೆ ಪೂರ್ಣ ಹದಗೆಟ್ಟಿದೆ. ಬೃಹದಾಕಾರದ ಹೊಂಡಗಳು ಬಿದ್ದಿವೆ. ಇದರಿಂದ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ಅಲ್ಲದೆ ರಸ್ತೆಯ ತುಂಬೆಲ್ಲ ಜಲ್ಲಿ ಕಲ್ಲುಗಳು ಬಿದ್ದಿವೆ, ತಗ್ಗು ಗುಂಡಿಗಳು ಬಿದ್ದಿವೆ. ಇದರಿಂದ ಶಾಲಾ ಮಕ್ಕಳು, ರೈತರು ಮುಖ್ಯವಾಗಿ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು