11:46 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು