12:34 PM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಹಲಾಲ್ v/s ಜಟ್ಕಾ ಕಟ್ ವಿವಾದ: ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ

02/04/2022, 16:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ  ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಖಡಕ್ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ.

ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ.

ಪ್ರಾಣಿ ವಧೆಗೂ ಮುನ್ನ ಸ್ಟನಿಂಗ್ ಮಾಡಲು ಸೂಚನೆ ನೀಡಲಾಗಿದ್ದು, ಸ್ಟನ್ನಿಂಗ್ ಸಿಸ್ಟಮ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರಾಣಿ ಹತ್ಯೆಗೂ ಮುನ್ನಾ ಪ್ರಾಣಿಗಳಿಗೆ ಪ್ರಜ್ಞೆ ತಪ್ಪಿಸಬೇಕಾಗುತ್ತದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ‌ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು