10:58 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಲಾಲ್ v/s ಜಟ್ಕಾ ಕಟ್ ವಿವಾದ: ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ

02/04/2022, 16:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ  ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಖಡಕ್ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ.

ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ.

ಪ್ರಾಣಿ ವಧೆಗೂ ಮುನ್ನ ಸ್ಟನಿಂಗ್ ಮಾಡಲು ಸೂಚನೆ ನೀಡಲಾಗಿದ್ದು, ಸ್ಟನ್ನಿಂಗ್ ಸಿಸ್ಟಮ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರಾಣಿ ಹತ್ಯೆಗೂ ಮುನ್ನಾ ಪ್ರಾಣಿಗಳಿಗೆ ಪ್ರಜ್ಞೆ ತಪ್ಪಿಸಬೇಕಾಗುತ್ತದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ‌ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು