9:19 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹಲಾಲ್ v/s ಜಟ್ಕಾ ಕಟ್ ವಿವಾದ: ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ

02/04/2022, 16:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ  ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಖಡಕ್ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ.

ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ.

ಪ್ರಾಣಿ ವಧೆಗೂ ಮುನ್ನ ಸ್ಟನಿಂಗ್ ಮಾಡಲು ಸೂಚನೆ ನೀಡಲಾಗಿದ್ದು, ಸ್ಟನ್ನಿಂಗ್ ಸಿಸ್ಟಮ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪ್ರಾಣಿ ಹತ್ಯೆಗೂ ಮುನ್ನಾ ಪ್ರಾಣಿಗಳಿಗೆ ಪ್ರಜ್ಞೆ ತಪ್ಪಿಸಬೇಕಾಗುತ್ತದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ‌ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈಗ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು