2:46 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಹಲವೆಡೆ ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 46 ಲಕ್ಷ ರೂ. ಮೌಲ್ಯದ 23 ಬೋಟುಗಳ ವಶ

05/10/2024, 10:19

ಮಂಗಳೂರು(reporterkarnataka.com): ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳ ತಂಡ, 23 ಬೋಟುಗಳನ್ನು ವಶಪಡಿಸಿದೆ.


ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರ ಜಂಟೀ ತಂಡವು ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ 23 ಬೋಟುಗಳನ್ನು ವಶಪಡಿಸಿದೆ.
ಬೋಟುಗಳ ಒಟ್ಟು ಅಂದಾಜು ಮೌಲ್ಯ ರೂ. 46 ಲಕ್ಷಗಳಾಗಿದ್ದು, ಇವುಗಳನ್ನು ಸದ್ಯ ಅಡ್ಯಾರ್ ಕಟ್ಟೆ ಸಮೀಪ ತಂದಿಡಲಾಗಿದೆ.
ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿ ಕಾರ್ಯಾಚರಣೆಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಹದೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು