3:41 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಹಲವು ಜೀವ ಬಲಿಗೆ ಕಾರಣವಾದ ಕೊಟ್ಟಿಗೆಹಾರ ಬಳಿಯ ಅಪಘಾತ ವಲಯದ 2 ತಿರುವುಗಳನ್ನು ನೇರ ಮಾಡುವಂತೆ ಸಾರ್ವಜನಿಕರ ಆಗ್ರಹ

18/10/2023, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಗೆ ಹೋಗುವ ಅಜಾದ್ ನಗರದ ಕೊಗಳತೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸುವ ತಿರುವುಗಳಿದ್ದು ಅಲ್ಲಿ ಅನೇಕ ವಾಹನ ಅಪಘಾತಗಳು ನಡೆದಿದ್ದು ಹಲವರು ಗಾಯಗೊಂಡಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ಭಾಗದಿಂದ ಕೊಟ್ಟಿಗೆಹಾರಕ್ಕೆ ಬರುವಾಗ ನೇರ ಇಳಿಜಾರು ರಸ್ತೆಯಿದ್ದು ಬರುವ ವಾಹನಗಳು ಹೋಟೆಲ್ ಬಳಿ ತಿರುವಿನಲ್ಲಿ ಮುಗ್ಗರಿಸಿ ಪಲ್ಟಿ ಹೊಡೆಯುತ್ತಿವೆ. ಇದರಿಂದ ಅನೇಕ ಪ್ರವಾಸಿಗರು ಅಪಘಾತಕ್ಕೀಡಾಗಿದ್ದಾರೆ. ಕೊಟ್ಟಿಗೆಹಾರದಿಂದ 50 ಮೀ ಅಂತರದ ಎರಡು ತಿರುವುಗಳು ಜನರ ಪಾಲಿನ ಮೃತ್ಯುಕೂಪಗಳಾಗಿವೆ. ಇತ್ತೀಚೆಗೆ ಗ್ಯಾಸ್ ಲಾರಿ ಹಾಗೂ ಎಳನೀರು ಲಾರಿ ಅಪಘಾತವಾಗಿತ್ತು. ಈ ಹಿಂದೆ ಹಲವು ದ್ವಿಚಕ್ರ ಸವಾರರು, ಹಲವು ಪ್ರವಾಸಿಗರು ಈ ನೇರ ರಸ್ತೆಯಲ್ಲಿ ವೇಗವಾಗಿ ಬಂದು ರಸ್ತೆಯ ಕೊನೆಯಲ್ಲಿ ಹಿಮ್ಮರಿ ತಿರುವು ತರಹ ತಿರುವು ಇರುವುದರಿಂದ ದರ್ಬಾರ್ ಹೋಟೆಲ್ ಬಳಿ ಹಾಗೂ ತರುವೆ ಗ್ರಾಮಕ್ಕೆ ತಿರುಗುವ ರಸ್ತೆ ಬಳಿ ತಿರುವುಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಿರುವುಗಳನ್ನು ನೇರ ಮಾಡಿ ಅಪಘಾತ ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ‘ಕೊಟ್ಟಿಗೆಹಾರದ ಬಳಿ ಎರಡು ಅಪಾಯದ ತಿರುವುಗಳಿದ್ದು ಅನೇಕ ಅಪಘಾತ ಸಂಭವಿಸಿವೆ. ಕೊಟ್ಟಿಗೆಹಾರ ತಲುಪುವ ಮುನ್ನವೇ ಜನರು ಪ್ರಾಣಾಪಾಯ ಸಂಭವಿಸುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತಿರುವುಗಳ ಬಗ್ಗೆ ಸೂಕ್ತ ಗಮನ ಹರಿಸಬೇಕೆಂದು ಕೊಟ್ಟಿಗೆಹಾರ
ಸಮಾಜ ಸೇವಕ ಸಂಜಯ್ ಗೌಡ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು