1:51 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಹಲವು ಕೌಶಲ್ಯಗಳ ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ: ಹಿರಿಯ ಪತ್ರಕರ್ತ ಬಾಳೆಪುಣಿ

23/07/2022, 21:27

ಮಂಗಳೂರು(reporterkarnataka.com): ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು.

ಶನಿವಾರ ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಪತ್ರಿಕೋದ್ಯಮ ವಿಭಾಗ ಸಹಯೋಗದಲ್ಲಿ ನಡೆದ ಇನ್ ಡಿಸೈನ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಪತ್ರಕರ್ತರು ಮುಖ್ಯವಾಗಿ ಸಂವಹನ ಕಲೆಯನ್ನು ಹೊಂದಿರಬೇಕು. ಪತ್ರಕರ್ತನಾದವನಿಗೆ ಕೇವಲ ಒಂದು ಕೌಶಲ್ಯ ಮಾತ್ರವಲ್ಲ ಹಲವು ಕೌಶಲ್ಯಗಳನ್ನು ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದರು.

ಪತ್ರಕರ್ತನಾದವನು ದೊಡ್ಡ ವ್ಯಕ್ತಿಗಳ ಬಗ್ಗೆ ಬರೆಯುವುದು ಮಾತ್ರವಲ್ಲದೇ, ಸಣ್ಣ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಬರೆಯುವುದರಿಂದ ಅವರೊಂದಿಗೆ ಪತ್ರಕರ್ತನ ಬೆಳವಣಿಗೆಯೂ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಮಾತನಾಡಿ ಪಠ್ಯದೊಂದಿಗೆ ಕೌಶಲ್ಯವು ಅಗತ್ಯವಿದ್ದು, ಒಬ್ಬ ವ್ಯಕ್ತಿಯನ್ನು ತಿದ್ದಿತೀಡಿದಾಗ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದ ಅವರು ತರಬೇತಿಯ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆಯಬೇಕು ಎಂದರು.

ವಿಜಯ ಕರ್ನಾಟಕ ಪತ್ರಿಕೆಯ ಉಪಸಂಪಾದಕ ಧರಣೇಶ್ ಕೆ.ಬಿ. ಅವರು ವಿದ್ಯಾರ್ಥಿಗಳಿಗೆ ಇನ್ ಡಿಸೈನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೊ. ಶಾಂತಿ ಉಪಸ್ಥಿತರಿದ್ದರು. ಚೇತನಾ ನಾಯಕ್ ಹಾಗೂ ಅಭಿಷೇಕ್ ಹೆಚ್.ಎಸ್. ಸಂಯೋಜಿಸಿದರು. ವಿದ್ಯಾರ್ಥಿಗಳಾದ ರಕ್ಷಿತಾ ನಿರೂಪಿಸಿದರು. ಶುಭಶ್ರೀ ಸ್ವಾಗತಿಸಿ, ಕಾವ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು