8:36 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಹಳೆ ಪ್ರಶ್ನೆ ಪತ್ರಿಕೆ ಪೂರೈಕೆ; ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

06/09/2022, 13:39

ಮಂಗಳೂರು(Reporterkarnataka.com):ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್‌ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮುಂದೂಡಲಾಗಿದೆ.

ಸೋಮವಾರ ಬಿಬಿಎ ವಿದ್ಯಾರ್ಥಿಗಳಿಗೆ ಮೊದಲ ದಿನ ಕನ್ನಡ ಪರೀಕ್ಷೆ ನಿಗದಿಯಾಗಿತ್ತು. ವಿದ್ಯಾರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆಯ ಮೇಲ್ಭಾಗದಲ್ಲಿ ‘ದ್ವಿತೀಯ ಸೆಮಿಸ್ಟರ್’ ಎಂದು ಬರೆಯಲಾಗಿತ್ತು.

ಆದರೆ ಅಲ್ಲಿ ಮುದ್ರಣವಾಗಿರುವ ಪ್ರಶ್ನೆಗಳು ಹಿಂದಿನ ಸೆಮಿಸ್ಟರ್‌ನದಾಗಿದ್ದವು. ಪರೀಕ್ಷೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಈ ಪ್ರಮಾದ ಗಮನಕ್ಕೆ ಬಂದಿದೆ. ತಕ್ಷಣ ಮಾಹಿತಿ ಪಡೆದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿದೆ.

ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ ಪಿ ಎಲ್ ಧರ್ಮ ಅವರು ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ. ಹೊಸ ಪ್ರಶ್ನೆ ಪತ್ರಿಕೆಯೊಂದಿಗೆ ಶೀಘ್ರ ಪರೀಕ್ಷೆ ನಡೆಸುವುದಾಗಿ ತಿಳಿಸಲಾಗಿದೆ.

ಪ್ರಶ್ನೆಪತ್ರಿಕೆ ಎಡವಟ್ಟು ಸಂಬಂಧ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಕಾಲೇಜುಗಳಿಗೆ ಪೂರೈಸುವ ಹೊಣೆ ಹೊತ್ತ ಸಂಬಂಧಪಟ್ಟ ಪರೀಕ್ಷಾ ವಿಭಾಗದ ಮುಖ್ಯಸ್ಥರಿಗೆ ಮಂಗಳೂರು ವಿಶ್ವವಿದ್ಯಾಲಯ ನೋಟಿಸ್ ಜಾರಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು