6:14 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು