5:38 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು