3:03 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು