11:51 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು