7:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು