4:03 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು