5:49 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹಳ್ಳೂರ: ಹಿಂದೂ -ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

17/07/2024, 23:41

ಸಂತೋಷ್ ಬೆಳಗಾವಿ

info.reporterkarnataka@gmail.com

ಮೂಡಲಗಿ ತಾಲೂಕಿನ ಹಳ್ಳೂರದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬುಧವಾರದಂದು ಬೇಧ ಭಾವ ಇಲ್ಲದೆ ಗ್ರಾಮಸ್ಥರೆಲ್ಲರು ಸೇರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಪಿರಸಾಭ ದರ್ಗಾ ದಿಂದ ದೇವರ ಡೊಲಿಯನ್ನು ಹೊರಗೆ ತಂದರು ಭಕ್ತರು ಲಾಲ್ ಸಾಬ್ ಕಿ ದೋಸ್ತ್ರಾ ದಿನ್ ಅನ್ನುತ್ತಾ ದೇವರ ಡೋಲಿಯ ಮೇಲೆ ಕಾರಿಕ್, ಬೆಂಡು ಬತ್ತಾಸು ಬಿಸ್ಕಿಟ್ಟ ಹಾರಿಸಿ ಹರಕೆ ತೀರಿಸಿದರು. ಗ್ರಾಮದ ಯುವಕರು ಖತಾಲಗಳ ಅನೇಕ ತಂಡದವರು ಹೆಜ್ಜೆ ಹಾಕುತ್ತಾ, ಕರಬಲ್ ಆಡುತ್ತಾ ಹೆಜ್ಜೆ ಕುಣಿತ ಲೇಜಿಮ್ ಕುಣಿತ, ಹಗ್ಗದ ಆಟ, ಬಾರಕೋಲ ಬಡಿತ, ತಾಳ ಬಡಿತ ಹೀಗೆ ಬೇರೆ ಬೇರೆ ಮನರಂಜನೆಯನ್ನು ಪ್ರದರ್ಶಿಸಿದರು. ಭವ್ಯವಾದ ಮೆರವಣಿಗೆ ನಡೆಯಿತು. ನಂತರ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ದೇವರು ಎಬ್ಬಿಸಿ ವರ್ಷದ ಮಳೆ ಬೆಳೆ ಒಳ್ಳೇದು, ಕೆಟ್ಟದ್ದು ಹೇಳುವ ನುಡಿಗಳು ನಡೆದವು. ನಂತರ ದೇವರುಗಳನ್ನು ಬಾವಿಗೆ ಕಳುಹಿಸುವುದರ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಮೊಹರಂ ಹಬ್ಬದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಹಾಗೂ ಹಿಂದೂ – ಮುಸ್ಲಿಂ ಸಮಾಜದ ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು