7:37 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಳ್ಳೂರ: ಹಿಂದೂ -ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

17/07/2024, 23:41

ಸಂತೋಷ್ ಬೆಳಗಾವಿ

info.reporterkarnataka@gmail.com

ಮೂಡಲಗಿ ತಾಲೂಕಿನ ಹಳ್ಳೂರದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬುಧವಾರದಂದು ಬೇಧ ಭಾವ ಇಲ್ಲದೆ ಗ್ರಾಮಸ್ಥರೆಲ್ಲರು ಸೇರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಪಿರಸಾಭ ದರ್ಗಾ ದಿಂದ ದೇವರ ಡೊಲಿಯನ್ನು ಹೊರಗೆ ತಂದರು ಭಕ್ತರು ಲಾಲ್ ಸಾಬ್ ಕಿ ದೋಸ್ತ್ರಾ ದಿನ್ ಅನ್ನುತ್ತಾ ದೇವರ ಡೋಲಿಯ ಮೇಲೆ ಕಾರಿಕ್, ಬೆಂಡು ಬತ್ತಾಸು ಬಿಸ್ಕಿಟ್ಟ ಹಾರಿಸಿ ಹರಕೆ ತೀರಿಸಿದರು. ಗ್ರಾಮದ ಯುವಕರು ಖತಾಲಗಳ ಅನೇಕ ತಂಡದವರು ಹೆಜ್ಜೆ ಹಾಕುತ್ತಾ, ಕರಬಲ್ ಆಡುತ್ತಾ ಹೆಜ್ಜೆ ಕುಣಿತ ಲೇಜಿಮ್ ಕುಣಿತ, ಹಗ್ಗದ ಆಟ, ಬಾರಕೋಲ ಬಡಿತ, ತಾಳ ಬಡಿತ ಹೀಗೆ ಬೇರೆ ಬೇರೆ ಮನರಂಜನೆಯನ್ನು ಪ್ರದರ್ಶಿಸಿದರು. ಭವ್ಯವಾದ ಮೆರವಣಿಗೆ ನಡೆಯಿತು. ನಂತರ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ದೇವರು ಎಬ್ಬಿಸಿ ವರ್ಷದ ಮಳೆ ಬೆಳೆ ಒಳ್ಳೇದು, ಕೆಟ್ಟದ್ದು ಹೇಳುವ ನುಡಿಗಳು ನಡೆದವು. ನಂತರ ದೇವರುಗಳನ್ನು ಬಾವಿಗೆ ಕಳುಹಿಸುವುದರ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಮೊಹರಂ ಹಬ್ಬದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಹಾಗೂ ಹಿಂದೂ – ಮುಸ್ಲಿಂ ಸಮಾಜದ ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು