5:14 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಳ್ಳೂರ: ಹಿಂದೂ -ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

17/07/2024, 23:41

ಸಂತೋಷ್ ಬೆಳಗಾವಿ

info.reporterkarnataka@gmail.com

ಮೂಡಲಗಿ ತಾಲೂಕಿನ ಹಳ್ಳೂರದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬುಧವಾರದಂದು ಬೇಧ ಭಾವ ಇಲ್ಲದೆ ಗ್ರಾಮಸ್ಥರೆಲ್ಲರು ಸೇರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಪಿರಸಾಭ ದರ್ಗಾ ದಿಂದ ದೇವರ ಡೊಲಿಯನ್ನು ಹೊರಗೆ ತಂದರು ಭಕ್ತರು ಲಾಲ್ ಸಾಬ್ ಕಿ ದೋಸ್ತ್ರಾ ದಿನ್ ಅನ್ನುತ್ತಾ ದೇವರ ಡೋಲಿಯ ಮೇಲೆ ಕಾರಿಕ್, ಬೆಂಡು ಬತ್ತಾಸು ಬಿಸ್ಕಿಟ್ಟ ಹಾರಿಸಿ ಹರಕೆ ತೀರಿಸಿದರು. ಗ್ರಾಮದ ಯುವಕರು ಖತಾಲಗಳ ಅನೇಕ ತಂಡದವರು ಹೆಜ್ಜೆ ಹಾಕುತ್ತಾ, ಕರಬಲ್ ಆಡುತ್ತಾ ಹೆಜ್ಜೆ ಕುಣಿತ ಲೇಜಿಮ್ ಕುಣಿತ, ಹಗ್ಗದ ಆಟ, ಬಾರಕೋಲ ಬಡಿತ, ತಾಳ ಬಡಿತ ಹೀಗೆ ಬೇರೆ ಬೇರೆ ಮನರಂಜನೆಯನ್ನು ಪ್ರದರ್ಶಿಸಿದರು. ಭವ್ಯವಾದ ಮೆರವಣಿಗೆ ನಡೆಯಿತು. ನಂತರ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ದೇವರು ಎಬ್ಬಿಸಿ ವರ್ಷದ ಮಳೆ ಬೆಳೆ ಒಳ್ಳೇದು, ಕೆಟ್ಟದ್ದು ಹೇಳುವ ನುಡಿಗಳು ನಡೆದವು. ನಂತರ ದೇವರುಗಳನ್ನು ಬಾವಿಗೆ ಕಳುಹಿಸುವುದರ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಮೊಹರಂ ಹಬ್ಬದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಹಾಗೂ ಹಿಂದೂ – ಮುಸ್ಲಿಂ ಸಮಾಜದ ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು