4:20 AM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಹಳ್ಳೂರ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ರಥೋತ್ಸವ: ವಾದ್ಯಮೇಳದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

27/08/2024, 11:26

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 26 ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಹಾಗೂ ರಥೋತ್ಸವವು ಸೋಮವಾರದಂದು ಅತೀ ವಿಜೃಂಭಣೆಯಿಂದ ಜರುಗಿತು.

ಮುಂಜಾನೆ ಶ್ರೀ ಬಸವೇಶ್ವರ ವಿಶೇಷ ಪೂಜೆ ಅಭಿಷೇಕ ನಡೆದು ಗ್ರಾಮದ ಸರ್ವ ದೇವರಿಗೆ ಗ್ರಾಮಸ್ಥ ರು ನೈವೇದ್ಯ ಅರ್ಪಿಸಿದರು. ಸಾಯಂಕಾಲ ಸಮಯದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಬಸವೇಶ್ವರ ಭವ್ಯ ರಥೋತ್ಸವಕ್ಕೆ ಪೂಜೆಯೊಂದಿಗೆ ಚಾಲನೆ ನೀಡಿದರು. ಗ್ರಾಮದ ಎರಡೂ ದೈವದ ಜೋಡು ಉಚಾಯಿ, ಕಾಂಡ್ಯಾಳು ಬಾಸಿಂಗ, ನಕ್ಷತ್ರ ಮಾಲೆ ರಾರಾಜಿಸುತ್ತಿದ್ದು ಹಾಗೂ ಸಕಲ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ರಥೋತ್ಸವ ಜರುಗಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಬಂದು ಸಂಪನ್ನಗೊಂಡಿತು. ಭಕ್ತಾದಿಗಳ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ ರಥೋತ್ಸವ ಮೇಲೆ ಬೆಂಡು ಬತ್ತಾಸು ಖಾರಿಕು ಹಾರಿಸಿ ಹರಕೆ ತೀರಿಸಿದರು. ಜಾತ್ರೆಯಲ್ಲಿ ಶ್ರೀ ಬಸವೇಶ್ವರ ಮಹಾರಾಜಕಿ ಜೈ ಅಂಥ ಜೈ ಕಾರ ಹಾಕುತ್ತಿದ್ದರು. ಜಾತ್ರೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು