6:30 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ

18/02/2022, 14:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಒಂದು ಕಡೆ ರಾಜ್ಯದಲ್ಲಿ ಹಿಜಾಬ್ /ಕೇಸರಿ ವಿವಾದ ತಲೆದೋರಿದರೆ, ಇನ್ನೊಂದು ಕಡೆ ಅಥಣಿ ತಾಲೂಕಿನ ಹಲ್ಯಾಳ ಯುವಕರು ಸ್ವಯಂ ಪ್ರೇರಣೆಯಿಂದ ಕೃಷ್ಣಾ ನದಿ ಸ್ವಚ್ಛತೆಗೆ  ಮುಂದಾಗಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.


ಹಲ್ಯಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರವ್ವ ಪರಸಪ್ಪ ಮಾದರ, ಅವರ ಮಗನಾದ ರಾಹುಲ್ ಪರಸಪ್ಪ, ಮಾದರ್ ಹಾಗೂ ವಿನೋದ್ ಅರ್ಜುನ್ ಕುರಣಿ, ಪುಂಡಲಿಕ್ ಚಂದ್ರಪ್ಪ ಮಾದರ ಅವರು ಸ್ವಯಂ ಪ್ರೇರಿತವಾಗಿ ನದಿ ದಡದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಚಿಂಚಲಿ ಮಯಕ್ಕಾ ದೇವಿಯ ಜಾತ್ರೆ ನಿಮಿತ್ಯ ಸಾವಿರಾರು ಭಕ್ತಾದಿಗಳು ಮೊದಲು ಕೃಷ್ಣ ನದಿ ಪವಿತ್ರ ಸ್ನಾನಕ್ಕೆ ಹೆಚ್ಚಿನ ಆದ್ಯತೆ ನೀಡಿ ತದನಂತರ ದೇವಿಯ ದರ್ಶನಕ್ಕೆ ಹೋಗುತ್ತಾರೆ. ಹೋದ ವರ್ಷ ಪ್ರವಾಹದಿಂದ ನದಿ ತೀರಕ್ಕೆ ಅಪಾರ ಪ್ರಮಾಣದಲ್ಲಿ ಮುಳ್ಳುಗಳು ತುಂಬಿ ಜನಗಳಿಗೆ ಸಮಸ್ಯೆ ಆಗುವುದನ್ನು ಅರಿತು ಖುದ್ದಾಗಿ ಗೆಳೆಯರೊಂದಿಗೆ ನದಿ ಸ್ವಚ್ಛತೆ ಕಾರ್ಯವನ್ನು  ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು