1:04 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಹಲ್ಯಾಳ: ಮಹಾತ್ಮ ಗಾಂಧಿ, ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ; ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

02/10/2023, 20:53

ಶಿವರಾಯ ಲಕ್ಷಣ್ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ನಿಮಿತ್ತವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ ಅವರು ಶಾಲೆಯ ಎಂಟನೇ ತರಗತಿಯ 67 ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯರಾದ ಮಂಜುನಾಥ ಹತ್ತಿ ಮಾತನಾಡಿ, ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ತಮ್ಮ ಜೀವನಕ್ಕೂ ಅಳವಡಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನೀಡಿ ಶಾಲೆಗೆ ಹಾಗೂ ಗ್ರಾಮಕ್ಕೆ ಹೆಸರು ಬೇಕು ಎಂದರು.


ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ದೀಪಕ್ ಮರಗುಂಡಿ ಮಾತನಾಡಿದ ಮುಂಬರುವ ದಿನಗಳಲ್ಲಿ ಗ್ರಾಮಕ್ಕೆ ಒಂದು ಪದವಿ ಪೂರ್ವ ಕಾಲೇಜಿನ ಅವಶ್ಯಕತೆ ಇದ್ದು ನಮ್ಮ ಗ್ರಾಮದಲ್ಲಿ ಪದವಿಪೂರ್ವ ಕಾಲೇಜನ್ನು ಮಂಜೂರು ಮನವಿ ಮಾಡಲಾಗುವುದು. ಈ ಶಾಲೆಗೆ ಬಡ ವಿದ್ಯಾರ್ಥಿಗಳು ಬರುವುದರಿಂದ ಎಲ್ಲ ವಿದ್ಯಾರ್ಥಿಗಳಿಗೂ ಸಮನಾದ ರೀತಿಯಲ್ಲಿ ಬ್ಯಾಗ್ ಕೊಡಿಸುವ ಆಸೆ ನನ್ನದಾಗಿತ್ತು. ಇಂದು ಎಲ್ಲ ವಿದ್ಯಾರ್ಥಿಗಳಿಗೂ ಬ್ಯಾಗ್ ವಿತರಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಮುದುಕಣ್ಣ ಸೇಗುಣಿಸಿ, ಉಪಾಧ್ಯಕ್ಷರಾದ ವಿಠ್ಠಲ ಮಂಗಸೂಳಿ, ಮಹದೇವ್ ಜಾಬಗೌಡರ, ಶಶಿಕಾಂತ ದಳವಾಯಿ, ಸಂತೋಷ್ ಕಾಂಬಳೆ, ಮುತ್ತಪ್ಪ ಸನದಿ, ಸಿದ್ದಪ್ಪ ಲೋಕೂರ, ಮುಖಂಡರಾದ ಮಹಾದೇವ್ ತಕತರಾವ ಮತ್ತು ಶಿಕ್ಷಕ ವರ್ಗಹಾಗೂ ಮುದ್ದು ವಿದ್ಯಾರ್ಥಿಗಳು ಹಾಗೂ ಸಮಸ್ತ ಹಲ್ಯಾಳ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು