5:07 PM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ

23/07/2021, 21:07

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು

ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ 41 ಪುಣ್ಯ ಸ್ಮರಣೆ ನಿಮಿತ್ತವಾಗಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 10 ದಿನಗಳ ಕಾಲ ಯಡಿಯೂರು ಸಿದ್ದಲಿಂಗ ಮಹಾಸ್ವಾಮಿಗಳ ಕುರಿತು ಪ್ರವಚನ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿತು.


ಸುಮಾರು 10 ದಿನಗಳ ಕಾಲ ವಿರಕ್ತ ಮಠ ಹಲ್ಯಾಳ ಪ್ರಣವಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಸಕಲ ಕಾರ್ಯಕ್ರಮಗಳು ಜರುಗಲಿದೆ. ಇದೇ ಸಂದರ್ಭದಲ್ಲಿ ನದಿ ಇಂಗಳಗಾಂವ ಗ್ರಾಮದ ಮು ನೀ ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಗುರು-ಲಿಂಗ-ಜಂಗಮ ಮಠ, ಹಲ್ಯಾಳ ಗ್ರಾಮದ ಯುವ ಬಿಜೆಪಿಯ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಸುರೇಶ್ ವಾಡೆದ, ರಾವಸಾಬ್ ಬಿ. ಪಾಟೀಲ್,  ಮಹಾದೇವ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಂಗಸೂಳಿ ,ಮಹಾಂತೇಶ್ ಇಂಗಳಿ, ಸಂಗಮೇಶ್ ಇಂಗಳಿ ,ಮಹಾಂತೇಶ್ ಮುಳವಾಡ, ಬಾಳಾಸಾಬ ಪಾಟೀಲ್, ಶ್ರೀ ಗುರುಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮುರಿಗೆಪ್ಪ ಗುಮಚಿ ಹಾಗೂ ಹಲ್ಯಾಳ ಗ್ರಾಮದ ಸಮಸ್ತ ಗುರುಹಿರಿಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು