4:33 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಂಪನಕಟ್ಟೆ: ಅಶ್ವಥ ಮರದ ಕೊಂಬೆ ಮುರಿದು ಬಿದ್ದು ಬಸ್ಸಿಗೆ ಕಾಯುತ್ತಿದ್ದ 3 ಮಂದಿ ವಿದ್ಯಾರ್ಥಿನಿಯರಿಗೆ ಗಾಯ

18/03/2025, 16:12

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಹಂಪನಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಬಳಿ ದೈತ್ಯಾಕಾರದ ಅಶ್ವಥ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನನಿಬಿಡವಾದ ಈ ಪ್ರದೇಶದಲ್ಲಿ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಬಸ್ ಕಾಯುತ್ತಿದ್ದ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಸಂದರ್ಭದಲ್ಲಿ ಅನೇಕ ಸಾರ್ವಜನಿಕರು ಅಲ್ಲೇ ನಿಂತಿದ್ದು ಬಹು ದೊಡ್ಡ ಅವಘಡವೊಂದು ತಪ್ಪಿದೆ.


ಅಧಿವೇಶನದಲ್ಲಿರುವ ಶಾಸಕ ವೇದವ್ಯಾಸ ಕಾಮತ್ ಅವರು ವಿಷಯ ತಿಳಿದ ಕೂಡಲೇ ನಿಕಟಪೂರ್ವ ಸ್ಥಳೀಯ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರನ್ನು ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿ, ಜಿಲ್ಲಾಧಿಕಾರಿ ಹಾಗೂ ನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಗಾಯಾಳುಗಳ ಚಿಕಿತ್ಸಾ ವೆಚ್ಚ ಸಹಿತ ಕೊಂಬೆಯ ತೆರವಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು