9:09 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಹಾನಗಲ್ ಬೈ ಎಲೆಕ್ಷನ್: ದಿನಾಂಕ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಫೈಟ್ 

28/06/2021, 08:13

ಕೃಷ್ಣಪ್ರಿಯಾ ಎಸ್. ಹಾವೇರಿ

info.reporterkarnataka.com

ಒಂದು ಕಡೆ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಬೀದಿ ರಂಪ ಶುರುವಾದರೆ ಇನ್ನೊಂದು ಕಡೆ ಹಾನಗಲ್ ಕ್ಷೇತ್ರದಿಂದ ಉಪ ಚುನಾವಣೆ ಸ್ಪರ್ಧಿಸಲು ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಾಜಿ ಸಚಿವ ಸಿ.ಎಂ. ಉದಾಸೀನ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಮನೋಹರ್ ತಹಶೀಲ್ದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಶ್ರೀನಿವಾಸ ಮಾನೆ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಬಿಜೆಪಿಯ ಸಿ.ಎಂ. ಉದಾಸಿ ಜಯಗಳಿಸಿದ್ದರು. ಹಾಗಾಗಿ ಈ ಬಾರಿ ಇದೇ ಇಬ್ಬರು ನಾಯಕರ ನಡುವೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ.

ಬೈಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಟಿಕೆಟ್ ಸಮರ ತಾರಕಕ್ಕೇರಿದೆ. ಮಾಜಿ ಸಚಿವ ಮನೋಹರ ತಹಶೀಲ್ದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಒಂದು ಸುತ್ತಿನ ಸಭೆ ಕೂಡ ನಡೆಸಿದ್ದಾರೆ. ಸಭೆಯಲ್ಲಿ ಹಾನಗಲ್‌ನವರಿಗೆ ಮಾತ್ರ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದು ಪರೋಕ್ಷವಾಗಿ

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಅವರಿಗೆ ಟಿಕೆಟ್‌ ನೀಡದಂತೆ ಎಚ್ಚರಿಕೆಯಾಗಿದೆ.

ಹೊರಗಿನವರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಶ್ರಿನಿವಾಸ ಮಾನೆ, ಸೋತರೂ ಕ್ಷೇತ್ರ ಬಿಟ್ಟು ಹೋಗದೆ ಕೆಲಸ ಮಾಡುತ್ತಿದ್ದರು. ಕ್ಷೇತ್ರದಲ್ಲಿಯೇ ಮನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು