4:10 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಹಾನಗಲ್ ಬೈ ಎಲೆಕ್ಷನ್: ದಿನಾಂಕ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಫೈಟ್ 

28/06/2021, 08:13

ಕೃಷ್ಣಪ್ರಿಯಾ ಎಸ್. ಹಾವೇರಿ

info.reporterkarnataka.com

ಒಂದು ಕಡೆ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಬೀದಿ ರಂಪ ಶುರುವಾದರೆ ಇನ್ನೊಂದು ಕಡೆ ಹಾನಗಲ್ ಕ್ಷೇತ್ರದಿಂದ ಉಪ ಚುನಾವಣೆ ಸ್ಪರ್ಧಿಸಲು ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಾಜಿ ಸಚಿವ ಸಿ.ಎಂ. ಉದಾಸೀನ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಮನೋಹರ್ ತಹಶೀಲ್ದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಶ್ರೀನಿವಾಸ ಮಾನೆ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಬಿಜೆಪಿಯ ಸಿ.ಎಂ. ಉದಾಸಿ ಜಯಗಳಿಸಿದ್ದರು. ಹಾಗಾಗಿ ಈ ಬಾರಿ ಇದೇ ಇಬ್ಬರು ನಾಯಕರ ನಡುವೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ.

ಬೈಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಟಿಕೆಟ್ ಸಮರ ತಾರಕಕ್ಕೇರಿದೆ. ಮಾಜಿ ಸಚಿವ ಮನೋಹರ ತಹಶೀಲ್ದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಒಂದು ಸುತ್ತಿನ ಸಭೆ ಕೂಡ ನಡೆಸಿದ್ದಾರೆ. ಸಭೆಯಲ್ಲಿ ಹಾನಗಲ್‌ನವರಿಗೆ ಮಾತ್ರ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದು ಪರೋಕ್ಷವಾಗಿ

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಅವರಿಗೆ ಟಿಕೆಟ್‌ ನೀಡದಂತೆ ಎಚ್ಚರಿಕೆಯಾಗಿದೆ.

ಹೊರಗಿನವರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಶ್ರಿನಿವಾಸ ಮಾನೆ, ಸೋತರೂ ಕ್ಷೇತ್ರ ಬಿಟ್ಟು ಹೋಗದೆ ಕೆಲಸ ಮಾಡುತ್ತಿದ್ದರು. ಕ್ಷೇತ್ರದಲ್ಲಿಯೇ ಮನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು