2:36 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹಣಗೆರೆಕಟ್ಟೆ ದೇವಸ್ಥಾನದ ಹಣ ಏರುಪೇರು ಆಗಿದ್ದು ಹೇಗೆ!?: ದೇವರ ಹಣದ ಲೆಕ್ಕ ಪಕ್ಕಾ ಮಾಡ್ತಾರಾ ತಹಸೀಲ್ದಾರ್?

09/11/2024, 16:20

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.
ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕವಾಗಿ 2 ಕೋಟಿ ರೂಪಾಯಿಗೂ ಹೆಚ್ಚು ಹುಂಡಿ ಹಣ ಸಂಗ್ರಹವಾಗುತ್ತಿದೆ. ತ್ರೈಮಾಸಿಕ ಎಣಿಕೆಯಲ್ಲಿ ಸರಾಸರಿ 50 ಲಕ್ಷ ಹಣ ಸಂಗ್ರಹಣೆಯಾಗುತ್ತಿದೆ. ಅದರಲ್ಲೂ ರಾಜ್ಯದಲ್ಲಿಯೇ ಅತೀ ಹೆಚ್ಚು ಹುಂಡಿಹಣ ಸಂಗ್ರಹವಾಗುವ ಮುಜರಾಯಿ ದೇವಸ್ಥಾನಗಳಲ್ಲಿ ತಾಲೂಕಿನ ಹಣಗೆರೆಕಟ್ಟೆ ದೇವಸ್ಥಾನ ಕೂಡ ಒಂದಾಗಿದೆ.
ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನದ ಹುಂಡಿ ಎಣಿಕೆಗೆ ತಾಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಬ್ಯಾಂಕ್ ಸಿಬ್ಬಂದಿಗಳು ತೆರಳುತ್ತಾರೆ. ಸಾರ್ವಜನಿಕರು ಅಥವಾ ಆಡಳಿತ ಮಂಡಳಿಗೆ ಅವಕಾಶ ನೀಡದೆ ಹಣವನ್ನು ಅಧಿಕಾರಿಗಳು ಎಣಿಸುತ್ತಾರೆ. ಈಗ ಆ ಎಣಿಕೆ ಪ್ರಕ್ರಿಯೆ ಬಗ್ಗೆ ಅನುಮಾನ ಹುಟ್ಟಿಸುವ ರೀತಿ ಮಾತುಗಳು ಕೇಳಿಬಂದಿದ್ದು ಇದಕ್ಕೆ ಅಧಿಕಾರಿಗಳು ಹೇಗೆ ಉತ್ತರ ನೀಡುತ್ತಾರೆ ಎಂಬುದೇ ಕುತೂಹಲ ಮೂಡಿಸಿದೆ.

ಪ್ರತಿಯೊಂದು ಮುಜರಾಯಿ ದೇವಸ್ಥಾನದ ಹುಂಡಿ ಹಣ ಎಣಿಸುವಾಗ ಒಂದು ಲಕ್ಷ ಮೌಲ್ಯದ ಹಣದ ಕಟ್ಟುಗಳನ್ನು ಸಿದ್ಧಪಡಿಸಿ ದೇವಸ್ಥಾನದ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತಾರೆ. ಆದರೆ ಹಣಗೆರೆ ಕಟ್ಟೆಯ ದೇವಸ್ಥಾನದಲ್ಲಿ ಆದ ಘಟನೆಯೇ ಬೇರೆ ಆಗಿದೆ. ಗುರುವಾರ ಎಂದಿನಂತೆ ಹೊಸದಾಗಿ ಇತ್ತೀಚಿಗೆ ಅಧಿಕಾರ ವಹಿಸಿಕೊಂಡ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ ಬೆಳಗ್ಗೆಯಿಂದ ಹುಂಡಿ ಎಣಿಕೆ ಮಾಡಿದೆ. ಸಂಜೆಯ ವೇಳೆಗೆ ಇನ್ನೇನು ಹುಂಡಿ ಹಣ ಮುಕ್ತಾಯ ಆಗಲಿದೆ ಎನ್ನುವಾಗ ನೂತನವಾಗಿ ಸರ್ಕಾರ ರಚನೆ ಮಾಡಿದ ಆಡಳಿತ ಮಂಡಳಿ ಅನುಮಾನ ವ್ಯಕ್ತಪಡಿಸಿದೆ.
ಅದಕ್ಕೆ ತಕ್ಕಂತೆ ಒಂದು ಲಕ್ಷ ಮೌಲ್ಯದ ಹಣದ ಕಟ್ಟುಗಳನ್ನು ಎಲ್ಲರೆದುರು ಮತ್ತೊಮ್ಮೆ ಎಣಿಸಿದಾಗ ಹೆಚ್ಚುವರಿ ಹಣ ಇರುವುದು ಪತ್ತೆಯಾಗಿದೆ. ಒಂದು ಲಕ್ಷ ಕಟ್ಟಿನೊಳಗೆಎರಡರಿಂದ ನಾಲ್ಕು ಸಾವಿರಕ್ಕೂ ಹೆಚ್ಚು ಹಣ ಲಭ್ಯವಾಗಿದೆ. ಇಂತಹ ಹಣ ಯಾರಿಗೆ ಹೋಗುತ್ತದೆ? ಅಧಿಕಾರಿಗಳ ಅಥವಾ ಬ್ಯಾಂಕ್ ಸಿಬ್ಬಂದಿಗಳ ಪಾಲಾಗುತ್ತಾ? ಎಂಬ ಚರ್ಚೆ ಅಲ್ಲಿನ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಆಗಿ ಮೊದಲ ಬಾರಿ ಹಣಗೆರೆ ಹುಂಡಿ ಎಣಿಕೆ ಮಾಡುವ ಸಂದರ್ಭದಲ್ಲಿ ಅಲ್ಲಿನ ದಂಧೆಯ ಕರಾಳತೆ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಬೆಚ್ಚಿ ಬಿದ್ದಿದ್ದಾರೆ. ದಂಧೆಯ ಬಗ್ಗೆ ಏನೇನು ಗೊತ್ತಿರದಿದ್ದರು ತಂಡದ ನೇತೃತ್ವ ವಹಿಸಿಕೊಂಡ ತಹಶೀಲ್ದಾರ್ ಪ್ರಕರಣವನ್ನು ಹೇಗೆ ಬೇಧಿಸಬೇಕು ಎಂಬ ಸುಳಿಗೆ ಸಿಲುಕಿದಂತಿದೆ. ನಂತರ ಆ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡದೇ ತಾಲೂಕು ಕಚೇರಿಯ ಟ್ರಜರಿಗೆ ತಂದು ಇಟ್ಟು ಇಂದು ಮತ್ತೊಮ್ಮೆ ಹಣಗೆರೆ ಕಟ್ಟೆಯ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗಿದೆ.
ಅಲ್ಲಿ ಸಾರ್ವಜನಿಕರ ಎದುರು ಮತ್ತೊಮ್ಮೆ ಹಣ ಎಣಿಕೆ ಕಾರ್ಯ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದ್ದು ಇಂದಾದರೂ ದೇವಸ್ಥಾನದ ಹುಂಡಿ ಹಣದ ಲೆಕ್ಕ ಇಂದು ಪಕ್ಕ ಆಗುತ್ತಾ? ಅಥವಾ ಮತ್ತೆ ಯಾರದ್ದೋ ಪಾಲಾಗುತ್ತಾ? ಎಂಬುದಾಗಿ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು