8:21 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು