8:03 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು