7:21 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು