6:39 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು