1:03 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು