2:26 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು