12:31 AM Thursday25 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು