7:41 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು