1:57 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು