11:53 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ

20/03/2025, 14:41

ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.
ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19ರಂದು ಆರಂಭಗೊಂಡಿದ್ದು, 21ರವರೆಗೆ ನಡೆಯಲಿದೆ. ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.


ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕೃಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.
ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.
ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು