9:15 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ರಂಗಭೂಮಿ ಜತೆ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

19/07/2021, 20:48

ಮಂಗಳೂರು(reporterkarnataka news): ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಅವರು ನಗರದ  ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ರಂಗಮಂದಿರ ಜತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ  ಈಗಾಗಲೇ  ಅನುದಾನ ಬಿಡುಗಡೆಯಾಗಿದೆ.  ಆಯಾ ಅಕಾಡೆಮಿ  ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು.

ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿ, ತುಳು ಭವನದ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ, ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೇದಿಕೆಯಲ್ಲಿದ್ದರು.

ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷರಾದ ಡಾ. ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು  ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು