4:47 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ರಂಗಭೂಮಿ ಜತೆ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

19/07/2021, 20:48

ಮಂಗಳೂರು(reporterkarnataka news): ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಅವರು ನಗರದ  ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ರಂಗಮಂದಿರ ಜತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ  ಈಗಾಗಲೇ  ಅನುದಾನ ಬಿಡುಗಡೆಯಾಗಿದೆ.  ಆಯಾ ಅಕಾಡೆಮಿ  ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು.

ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿ, ತುಳು ಭವನದ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ, ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೇದಿಕೆಯಲ್ಲಿದ್ದರು.

ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷರಾದ ಡಾ. ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು  ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು