10:59 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ರಂಗಭೂಮಿ ಜತೆ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

19/07/2021, 20:48

ಮಂಗಳೂರು(reporterkarnataka news): ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಅವರು ನಗರದ  ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ರಂಗಮಂದಿರ ಜತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ  ಈಗಾಗಲೇ  ಅನುದಾನ ಬಿಡುಗಡೆಯಾಗಿದೆ.  ಆಯಾ ಅಕಾಡೆಮಿ  ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು.

ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿ, ತುಳು ಭವನದ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ, ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೇದಿಕೆಯಲ್ಲಿದ್ದರು.

ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷರಾದ ಡಾ. ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು  ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು