5:36 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆ: ಅಬ್ಬರಿಸಿ ಬೊಬ್ಬಿರಿಸಿದ ದಶ ಮಂಟಪಗಳು

02/12/2025, 22:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣ್ಣದ ಕಳೆದ 40 ವರ್ಷಗಳಿಂದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಆಚರಿಸಿಕೊಂಡು ಬರುತ್ತಿರುವ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಕಳೆಗಟ್ಟಿದ್ದ ಪಟ್ಟಣದ ರಥ ಬೀದಿ ಅದ್ದೂರಿ ಮಂಟಪಗಳ ಮೆರವಣಿಗೆಗೆ ಸಾಕ್ಷಿಯಾಯಿತು. ಆಂಜನೇಯನ ಸಾಹಸ, ಶಕ್ತಿ ಹೊಂದಿರುವ ವಿವಿಧ ಕಥಾಹಂದರದ ಹೊತ್ತು ಸಾಗಿದ ಮಂಟಪಗಳಲ್ಲಿ ಡಿಜೆ, ಆಕರ್ಷಕ ವಿದ್ಯುತ್ ಅಲಂಕಾರಕ್ಕೆ ಸಾರ್ವಜನಿಕರು ಫಿದಾ ಆದರು, ಯುವ ಸಮೂಹ ಕುಣಿದು ಕುಪ್ಪಲಿಸಿ ಸಂಭ್ರಮಿಸಿದರು.


ಕೂಡಿಗೆ, ಮುಳ್ಳುಸೋಗೆ, ಕೊಪ್ಪ, ಮಾದಪಟ್ಟಣ, ಗುಡ್ಡೆಹೊಸೂರು ಭಾಗದಿಂದ ಮಂಟಪಗಳು ಸಂಜೆ 7 ಗಂಟೆ ಸುಮಾರಿಗೆ ಪಟ್ಟಣ ಪ್ರವೇಶಿಸಿದವು. ಇಲ್ಲಿನ ಗಣಪತಿ ದೇವಾಲಯ ಆವರಣದಲ್ಲಿ ಪ್ರದರ್ಶನ ನೀಡಿದ್ದು, ಸಾರ್ವಜನಿಕರು ಮೂಕ ವಿಸ್ಮಿತರಾದರು. ಪ್ರತಿ ವರ್ಷದಂತೆ ಈ ಭಾರಿಯೂ ಪಕ್ಕದ ಜಿಲ್ಲೆ ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕು, ಹಾಸನ ಭಗದಿಂದಲೂ ಅದ್ದೂರಿ ಉತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು