3:47 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ : ಮುಖ್ಯಮಂತ್ರಿ ಬೊಮ್ಮಾಯಿ

03/04/2022, 20:07

ಬೆಂಗಳೂರು(reporterkarnataka.com): ಹನುಮನ ಜನ್ಮಸ್ಥಳ ಹಂಪಿ ಬಳಿಯ ಅಂಜನಾದ್ರಿ ಶ್ರೀಕ್ಷೇತ್ರವನ್ನ ಅಭಿವೃದ್ಧಿಪಡಿಸಲು ಸರಕಾರ ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಶ್ರೀರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ ಪ್ರಾರಂಭವಾಗಲಿದೆ. ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ತಿಳಿದಿರುವ ತಜ್ಞರ ಹೆಸರುಗಳನ್ನು ಒದಗಿಸಲು ಮನವಿ ಮಾಡಲಾಗಿದೆ ಎಂದರು.

ಶ್ರೀ ರಾಮ ಸೇವಾ ಮಂಡಳಿಯವರು ಸ್ಥಾಪಿಸಲು ಉದ್ದೇಶಿಸಿರುವ ಕಲಾ ಸಾಕೇತ್ ಸ್ಥಾಪನೆಗೆ ಸರಕಾರ ನೆರವು ಒದಗಿಸುವುದು ಎಂದು ಭರವಸೆ ನೀಡಿದರು.

ಸಂಗೀತ ಅವಿಭಾಜ್ಯ ಅಂಗ: ಪ್ರತಿಶಬ್ಧಕ್ಕೂ ತನ್ನದೇ ರಾಗತಾಳವಿರುತ್ತದೆ. ಸಂಗೀತ ಮನುಷ್ಯನ ಸಂಗೀತ ಉತ್ಸಾಹ, ಆನಂದ, ಸಮಾಧಾನ, ಭಾವನೆಗಳನ್ನು ಅಭಿವ್ಯಕ್ತಿ ಪಡಿಸುವ ಮಾಧ್ಯಮವೂ ಹೌದು. ದಣಿದಾಗ ಸಂಗೀತ ಕೇಳಿದರೆ ಆಹ್ಲಾದ ಉಂಟಾಗುತ್ತದೆ ಎಂದರು.

ಕಳೆದ 8 ದಶಕಗಳಿಂದ ಶ್ರೀರಾಮನವಮಿ ಸಂದರ್ಭದಲ್ಲಿ ಸಂಗೀತೋತ್ಸವ ಆಯೋಜಿಸುತ್ತಿರುವ ಶ್ರೀರಾಮ ಸೇವಾ ಮಂಡಳಿಯ ಎಲ್ಲರೂ ಅಭಿನಂದನಾರ್ಹರು. ಸಂಗೀತದಿಂದ ಉತ್ತಮವಾಗಿ ಭಕ್ತಿಯ ಅಭಿವ್ಯಕ್ತಿಯಾಗುತ್ತದೆ. ಕೆಲವು ಭಕ್ತಿ ಗೀತೆಗಳು ಅತ್ಯಂತ ಪ್ರಭಾವಶಾಲಿಯಾಗಿರುತ್ತದೆ. ನಾನು ಶ್ರೀರಾಮ ಹಾಗೂ ಹನುಮನ ಭಕ್ತ. ಅದರೊಂದಿಗೆ ಸಂಗೀತದ ಭಕ್ತನೂ ಹೌದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು