8:50 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ

19/04/2025, 19:17

ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು.
ಈಸ್ಟರ್ ಎಂದರೆ ವಿಜಯದ ಹಬ್ಬ – ಕೇಡಿನ ಮೇಲೆ ಸದ್ಗುಣಗಳ ಜಯ, ಅಸತ್ಯದ ಮೇಲೆ ಸತ್ಯದ ಜಯ, ಅಂಧಕಾರದ ಮೇಲೆ ಬೆಳಕಿನ ಜಯ, ಮರಣದ ಮೇಲೆ ಜೀವದ ಜಯ. ಯೇಸು ಕ್ರಿಸ್ತರು ತಮ್ಮ ಮರಣ ಮತ್ತು ಪುನರುತ್ಥಾನದ ಮೂಲಕ ನಮಗೆ ನವಜೀವನದ ದಾರಿ ತೋರಿಸಿದ್ದಾರೆ. ಅವರ ವಿಜಯದಲ್ಲಿ ನಾವು ಪಾಲುಗಾರರಾಗುವ ಮೂಲಕ, ನಮ್ಮ ಜೀವನದಲ್ಲಿ ಸತ್ಯ ಹಾಗು ಬೆಳಕಿನಲ್ಲಿ ನಡೆದು ಹೊಸ ಜೀವ ಪಡೆಯಬಹುದು.

ಈ ಈಸ್ಟರ್ ಸಮಯದಲ್ಲಿ ನಾವು ಸಹಾನುಭೂತಿ, ಕ್ಷಮೆ ಮತ್ತು ಪ್ರೀತಿಯ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಭರವಸೆ ಉಂಟುಮಾಡುವ ಸಂಕಲ್ಪವನ್ನು ಮಾಡೋಣ. ಕ್ರಿಸ್ತರು ತೋರಿಸಿದ ಮಾರ್ಗ ನಮ್ಮನ್ನು ನಡೆಸಲಿ. ನಾವು ಎಲ್ಲರಿಗೂ ದೇವರ ಪ್ರೀತಿಯ ಪ್ರತಿಬಿಂಬಗಳಾಗಿರೋಣ. ಒಗ್ಗಟ್ಟಿನಿಂದ, ದೇವರ ಕೃಪೆಯಲ್ಲಿ ನಾವು ಬೆಳೆಯುವ ಹಾಗು ನಮ್ಮ ಸುತ್ತಲಿನವರಿಗೆ ಶಾಂತಿ ಮತ್ತು ಸದ್ಭಾವನೆಯ ಸಂದೇಶವನ್ನು ಹಂಚಿಕೊಳ್ಳುವ.

ಇಂದು ಮತ್ತು ಸದಾ, ಕ್ರಿಸ್ತರ ಪುನರುತ್ಥಾನದ ಸಂತೋಷ ನಿಮ್ಮ ಕುಟುಂಬಗಳಿಗೆ ಆಶೀರ್ವಾದ ತರಲಿ ಎಂದು ಪ್ರಾರ್ಥಿಸುತ್ತೇನೆ.

ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು