5:56 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ

19/04/2025, 19:17

ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು.
ಈಸ್ಟರ್ ಎಂದರೆ ವಿಜಯದ ಹಬ್ಬ – ಕೇಡಿನ ಮೇಲೆ ಸದ್ಗುಣಗಳ ಜಯ, ಅಸತ್ಯದ ಮೇಲೆ ಸತ್ಯದ ಜಯ, ಅಂಧಕಾರದ ಮೇಲೆ ಬೆಳಕಿನ ಜಯ, ಮರಣದ ಮೇಲೆ ಜೀವದ ಜಯ. ಯೇಸು ಕ್ರಿಸ್ತರು ತಮ್ಮ ಮರಣ ಮತ್ತು ಪುನರುತ್ಥಾನದ ಮೂಲಕ ನಮಗೆ ನವಜೀವನದ ದಾರಿ ತೋರಿಸಿದ್ದಾರೆ. ಅವರ ವಿಜಯದಲ್ಲಿ ನಾವು ಪಾಲುಗಾರರಾಗುವ ಮೂಲಕ, ನಮ್ಮ ಜೀವನದಲ್ಲಿ ಸತ್ಯ ಹಾಗು ಬೆಳಕಿನಲ್ಲಿ ನಡೆದು ಹೊಸ ಜೀವ ಪಡೆಯಬಹುದು.

ಈ ಈಸ್ಟರ್ ಸಮಯದಲ್ಲಿ ನಾವು ಸಹಾನುಭೂತಿ, ಕ್ಷಮೆ ಮತ್ತು ಪ್ರೀತಿಯ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಭರವಸೆ ಉಂಟುಮಾಡುವ ಸಂಕಲ್ಪವನ್ನು ಮಾಡೋಣ. ಕ್ರಿಸ್ತರು ತೋರಿಸಿದ ಮಾರ್ಗ ನಮ್ಮನ್ನು ನಡೆಸಲಿ. ನಾವು ಎಲ್ಲರಿಗೂ ದೇವರ ಪ್ರೀತಿಯ ಪ್ರತಿಬಿಂಬಗಳಾಗಿರೋಣ. ಒಗ್ಗಟ್ಟಿನಿಂದ, ದೇವರ ಕೃಪೆಯಲ್ಲಿ ನಾವು ಬೆಳೆಯುವ ಹಾಗು ನಮ್ಮ ಸುತ್ತಲಿನವರಿಗೆ ಶಾಂತಿ ಮತ್ತು ಸದ್ಭಾವನೆಯ ಸಂದೇಶವನ್ನು ಹಂಚಿಕೊಳ್ಳುವ.

ಇಂದು ಮತ್ತು ಸದಾ, ಕ್ರಿಸ್ತರ ಪುನರುತ್ಥಾನದ ಸಂತೋಷ ನಿಮ್ಮ ಕುಟುಂಬಗಳಿಗೆ ಆಶೀರ್ವಾದ ತರಲಿ ಎಂದು ಪ್ರಾರ್ಥಿಸುತ್ತೇನೆ.

ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು