5:18 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರು ಬಿಷಪ್ ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಈಸ್ಟರ್ ಹಬ್ಬದ ಶುಭ ಸಂದೇಶ

19/04/2025, 19:17

ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು.
ಈಸ್ಟರ್ ಎಂದರೆ ವಿಜಯದ ಹಬ್ಬ – ಕೇಡಿನ ಮೇಲೆ ಸದ್ಗುಣಗಳ ಜಯ, ಅಸತ್ಯದ ಮೇಲೆ ಸತ್ಯದ ಜಯ, ಅಂಧಕಾರದ ಮೇಲೆ ಬೆಳಕಿನ ಜಯ, ಮರಣದ ಮೇಲೆ ಜೀವದ ಜಯ. ಯೇಸು ಕ್ರಿಸ್ತರು ತಮ್ಮ ಮರಣ ಮತ್ತು ಪುನರುತ್ಥಾನದ ಮೂಲಕ ನಮಗೆ ನವಜೀವನದ ದಾರಿ ತೋರಿಸಿದ್ದಾರೆ. ಅವರ ವಿಜಯದಲ್ಲಿ ನಾವು ಪಾಲುಗಾರರಾಗುವ ಮೂಲಕ, ನಮ್ಮ ಜೀವನದಲ್ಲಿ ಸತ್ಯ ಹಾಗು ಬೆಳಕಿನಲ್ಲಿ ನಡೆದು ಹೊಸ ಜೀವ ಪಡೆಯಬಹುದು.

ಈ ಈಸ್ಟರ್ ಸಮಯದಲ್ಲಿ ನಾವು ಸಹಾನುಭೂತಿ, ಕ್ಷಮೆ ಮತ್ತು ಪ್ರೀತಿಯ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಭರವಸೆ ಉಂಟುಮಾಡುವ ಸಂಕಲ್ಪವನ್ನು ಮಾಡೋಣ. ಕ್ರಿಸ್ತರು ತೋರಿಸಿದ ಮಾರ್ಗ ನಮ್ಮನ್ನು ನಡೆಸಲಿ. ನಾವು ಎಲ್ಲರಿಗೂ ದೇವರ ಪ್ರೀತಿಯ ಪ್ರತಿಬಿಂಬಗಳಾಗಿರೋಣ. ಒಗ್ಗಟ್ಟಿನಿಂದ, ದೇವರ ಕೃಪೆಯಲ್ಲಿ ನಾವು ಬೆಳೆಯುವ ಹಾಗು ನಮ್ಮ ಸುತ್ತಲಿನವರಿಗೆ ಶಾಂತಿ ಮತ್ತು ಸದ್ಭಾವನೆಯ ಸಂದೇಶವನ್ನು ಹಂಚಿಕೊಳ್ಳುವ.

ಇಂದು ಮತ್ತು ಸದಾ, ಕ್ರಿಸ್ತರ ಪುನರುತ್ಥಾನದ ಸಂತೋಷ ನಿಮ್ಮ ಕುಟುಂಬಗಳಿಗೆ ಆಶೀರ್ವಾದ ತರಲಿ ಎಂದು ಪ್ರಾರ್ಥಿಸುತ್ತೇನೆ.

ಅ। ವಂ। ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು