6:32 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹರೇಕಳದಿಂದ ಹೊಸದಿಲ್ಲಿಗೆ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದೆಹಲಿ ವಿಮಾನವೇರಿದ ಅಕ್ಷರ ಸಂತ ಹರೇಕಳ ಹಾಜಬ್ಬ

07/11/2021, 19:20

ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದೇಶದ ರಾಜಧಾನಿಗೆ ತೆರಳಿದರು. 

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನಾಳೆ ಅವರಿಗೆ ರಾಷ್ಟಪತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಯ ವಿಮಾನ ಏರಿದ ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು