7:07 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹರೇಕಳದಿಂದ ಹೊಸದಿಲ್ಲಿಗೆ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದೆಹಲಿ ವಿಮಾನವೇರಿದ ಅಕ್ಷರ ಸಂತ ಹರೇಕಳ ಹಾಜಬ್ಬ

07/11/2021, 19:20

ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದೇಶದ ರಾಜಧಾನಿಗೆ ತೆರಳಿದರು. 

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನಾಳೆ ಅವರಿಗೆ ರಾಷ್ಟಪತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಯ ವಿಮಾನ ಏರಿದ ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು