10:07 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ

08/11/2021, 12:14

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು.

ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ಮುಂಬಯಿ ಮೂಲಕ ಅವರು ದೇಶದ ರಾಜಧಾನಿ ತಲುಪಿದ್ದರು.

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು. ಇದೀಗ ರಾಷ್ಟ್ರಪತಿಭವಕ್ಕೂ ಅದೇ ರೀತಿಯ ಮಾಸಿದ ಬಿಳಿ ಪಂಚೆ ಮತ್ತೆ ಬಿಳಿ ಶರ್ಟ್ ತೊಟ್ಟು ಕೈಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದುಕೊಂಡು ತೆರಳಿದ್ದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು